ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….