ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.
ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-
ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.
ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-
ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.
ಬೀಟ್ರೂಟ್ ಜ್ಯೂಸ್:-
ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ
ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-
ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.
ಬೀಟ್ರೂಟ್ ಫ್ರೈ:-
ಬೀಟ್ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ
ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-
ಬೀಟ್ರೂಟ್ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್ರೂಟ್ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…