ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.
ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.
ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-
ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.
ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.
ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-
ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.
ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.
ಬೀಟ್ರೂಟ್ ಜ್ಯೂಸ್:-
ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.
ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ
ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-
ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.
ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.
ಬೀಟ್ರೂಟ್ ಫ್ರೈ:-
ಬೀಟ್ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.
ಅದನ್ನು ಬೀಟ್ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ
ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-
ಬೀಟ್ರೂಟ್ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).
ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್ರೂಟ್ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…