ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.
ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.
45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.
ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್ಗೆ 9 ವರ್ಷ.
ಎಸ್ಎಸ್ಎಲ್ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್ನ ತಮ್ಮ ಸಲೂನ್ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.
ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.
ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…