ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಜೀವಕೋಶದ ಕಾರ್ಯ ಹೆಚ್ಚುವುದು:-
ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.
ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.
ಚರ್ಮದ ಕಾಂತಿ ಹೆಚ್ಚುವುದು:-
ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.
ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.
ಸಂಧಿವಾತವನ್ನು ತಡೆಯುತ್ತದೆ:-
ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.
ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.
ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-
ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.
ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.
ತೂಕ ಇಳಿಸುವುದು:-
ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.
ಕೂದಲು ಉದುರುವಿಕೆಯನ್ನು ತಡೆಯುತ್ತದೆ:-
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.
ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..