ಆರೋಗ್ಯ

ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

1537

ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

 

 

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ  ಅನೇಕ ಆರೋಗ್ಯ ಲಾಭ ಪಡೆಯಬಹುದು.

ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್:

ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.

ಚರ್ಮದ ಸೋಂಕನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ :

ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.

ಶ್ವಾಸಕೋಶದ ತೊಂದರೆಗಳನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.

ಮೆಟಬಾಲಿಸಂ ಹೆಚ್ಚಿಸುತ್ತದೆ:

ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.

ಹಲ್ಲುನೋವು :

ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…