ಸುದ್ದಿ

ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

150

ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ ಬಿದ್ದಿದ್ದಾನೆ.

ಸರಿಸುಮಾರು 7 ಇಂಚು ಅಗಲವಿರುವ ಈ ಕೊಳವೆ ಬಾವಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಇದನ್ನು ಗಮನಿಸದ ಬಾಲಕ ಆಟವಾಡುತ್ತಾ ಅದರ ಒಳಗಡೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ತಾಯಿ ಬಾಲಕನನ್ನು ರಕ್ಷಿಸಲು ಮುಂದಾದ್ರೂ ವಿಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆ ಬಳಿಕ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸುಮಾರು 5 ದಿನಗಳಿಂದ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಬಾಲಕನನ್ನು ಬೋರ್ ವೆಲ್ ಒಳಗಡೆಯಿಂದ ರಕ್ಷಿಸಲಾಯಿತು. ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆ ರಾಜ್ಯದಲ್ಲಿ ಚಾಪರ್ ನಿಲುಗಡೆ ಮಾಡಲು ಸಾಧ್ಯವಿಲ್ಲವಾಯಿತು. ಹೀಗಾಗಿ ಬಾಲಕನನ್ನು ರಸ್ತೆ ಮಾರ್ಗವಾಗಿ 140 ಕೀ.ಮಿ ತೆರಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ದೇವರು ಆತನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಕಳೆದ ರಾತ್ರಿ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಲ್ಲಿನ ಮುಖ್ಯಮಂತ್ರಿಗಳು ಕೂಡ ವಿರೋಧ ಪಕ್ಷಗಳು ಕಾರ್ಯಾಚರಣೆಯನ್ನು ತಡಮಾಡುತ್ತವೆ ಎಂದು ಆರೋಪಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಉಪಯುಕ್ತ ಮಾಹಿತಿ

    ಕಾಲಿನ ಬೆರಳುಗಳು ನೋಡಿ ವ್ಯಕ್ತಿತ್ವ ತಿಳಿದುಕೊಳ್ಳುವುದು ಹೇಗೆ ಎಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.