ಆಟೋಮೊಬೈಲ್ಸ್

ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

1294

ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-

ಆದ್ರೆ ಅಂತಹ ಬೈಕ್‌ಗಳ ರಾಜ, ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.

ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್‌ಫೀಲ್ಡ್ ಬೈಕ್‌ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್‌ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.

ಬಜಾಜ್ ಆಟೋದಿಂದ ರಾಯಲ್ ಎನ್‌ಫೀಲ್ಡ್ ಬೈಕ್’ನ ವ್ಯಂಗ್ಯ :-

ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್‌ಫೀಲ್ಡ್ ಬೈಕ್‌ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.

ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್‌ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.

ಡೊಮಿನರ್‌ನಿಂದ ಅಪಹಾಸ್ಯ :-

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್‌ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್‌ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.

ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್‌ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…

ಎನ್‌ಫೀಲ್ಡ್ ಬೈಕ್’ನ್ನು  ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಗೊತ್ತಾ?  (ಫೀಚರ್)

ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,

ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,

ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ

ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,

ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್,
ಆಟೋ ಹೆಡ್‌ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್‌ಸಿಡಿ ಡಿಸ್‌ಪ್ಲೇ,

ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.

ಮೂಲ:ಮಾಹಿತಿ ಸಂಗ್ರಹ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….