ಆಟೋಮೊಬೈಲ್ಸ್

ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

1297

ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-

ಆದ್ರೆ ಅಂತಹ ಬೈಕ್‌ಗಳ ರಾಜ, ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.

ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್‌ಫೀಲ್ಡ್ ಬೈಕ್‌ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್‌ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.

ಬಜಾಜ್ ಆಟೋದಿಂದ ರಾಯಲ್ ಎನ್‌ಫೀಲ್ಡ್ ಬೈಕ್’ನ ವ್ಯಂಗ್ಯ :-

ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್‌ಫೀಲ್ಡ್ ಬೈಕ್‌ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.

ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್‌ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.

ಡೊಮಿನರ್‌ನಿಂದ ಅಪಹಾಸ್ಯ :-

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್‌ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್‌ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.

ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್‌ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…

ಎನ್‌ಫೀಲ್ಡ್ ಬೈಕ್’ನ್ನು  ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಗೊತ್ತಾ?  (ಫೀಚರ್)

ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,

ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,

ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ

ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,

ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್,
ಆಟೋ ಹೆಡ್‌ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್‌ಸಿಡಿ ಡಿಸ್‌ಪ್ಲೇ,

ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.

ಮೂಲ:ಮಾಹಿತಿ ಸಂಗ್ರಹ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…