ಆರೋಗ್ಯ

ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

809

ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…