News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

812

ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ರಾಜರಾಜೇಶ್ವರಿನಗರ ಮುನಿರತ್ನ VS ಪ್ರಜ್ವಲ್ ರೇವಣ್ಣ ನೀವು ಯಾರನ್ನ ಬೆಂಬಲಿಸುತ್ತೀರಾ..?

    ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…