ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ. ಧಾರವಾಡದ ಎಸ್ಡಿಎಂ ನಾರಾಯಣ ಹೃದಯಾಲಯದ ವೈದ್ಯರು ಯಶಸ್ವಿ ಚಿಕಿತ್ಸೆ ಮಾಡಿದ್ದು, ಬ್ಯಾಟರಿ ಮೂಲಕ ಬಾಲಕನ ಹೃದಯಕ್ಕೆ ಚಾಲನೆ ನೀಡಿದ್ದಾರೆ. ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯಿಂದ ಬಾಲಕನ ಹೃದಯ ಚಾಲನೆಯಲ್ಲಿದೆ. ವೈದ್ಯ ಅರುಣ ಬಬಲೇಶ್ವರ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ..

ಹೃದಯ ಬಡಿತ ನಿಮಿಷಕ್ಕೆ 100ಕ್ಕಿಂತ ಅಧಿಕ ಇರುವಲ್ಲಿ ಈ ಬಾಲಕನ ಹೃದಯ ಬಡಿತ ಕೆವಲ 39 ಇತ್ತು. ಹೀಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಹೋದಾಗ ಪೋಷಕರಿಗೆ ಬೆಂಗಳೂರಿನಲ್ಲಿ ತೋರಿಸಿ ಎಂದು ಹೇಳಿದ್ದರು ವೈದ್ಯರು. ಖುದ್ದು ಎಸ್ಡಿಎಂ ನಾರಾಯಾಣ ಹೃದಯಾಲಯದ ವೈದ್ಯರ ಬಳಿ ಬಂದಾಗ, ಬಿಪಿಎಲ್ ಕಾರ್ಡ್ ಮೇಲೆ ಉಚಿತವಾಗಿ 4 ವರ್ಷದ ಬಾಲಕ ಅಮೊಘನಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಬಾಲಕ ಎಲ್ಲರಂತೆ ಈಗ ಆರೋಗ್ಯವಾಗಿದ್ದಾನೆ. ಇನ್ನು ಈ ರೀತಿಯಾಗಿ ಶಸ್ತ್ರ ಚಿಕೆತ್ಸೆ ಮಾಡಿದ ಬಳಿಕ ಸುಮಾರು 10 ವರ್ಷಕ್ಕೊಮ್ಮೆ ಈ ರೀತಿಯಾಗಿ ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಬಾಲಕನ ಪೋಷಕರು ಕೂಡ ತಯಾರಾಗಿದ್ದಾರೆ. ವೃತ್ತಿಯಲ್ಲಿ ಗೌಂಡಿ ಕೆಲಸ ಮಾಡಿಕೊಂಡಿರುವ ದಾಂಡೇಲಿ ಮೂಲದ ಪ್ರಕಾಶ ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.

ಬಾಲಕ ಸದ್ಯಕ್ಕೆ ಆರೋಗ್ಯವಾಗಿದ್ದು, ಎಲ್ಲರಂತೆ ಓಡಾಡಿಕೊಂಡು ಇದ್ದಾನೆ. ಬಡ ದಂಪತಿಗಳು ಹಣದ ಖರ್ಚು ಜಾಸ್ತಿ ಆಗುತ್ತೆ ಎಂದು ಹಾಗೆ ಬಿಟ್ಟಿದ್ದರೆ, ಮುಂದಿನ ದಿನಗಳಲ್ಲಿ ಬಾಲಕನ ಆರೋಗ್ಯಕ್ಕೆ ಸಮಸ್ಯೆಯಾಗುತ್ತಿತ್ತು. ಆದ್ರೆ ಅವೆಲ್ಲಾ ಸಮಸ್ಯೆಗಳನ್ನು ನಾರಾಯಾಣ ಹೃದಯಾಲಯದ ವೈದ್ಯರು ದೂರ ಮಾಡಿ, ಬಾಲಕನಿಗೆ ಮತ್ತೊಮ್ಮೆ ಮರುಜೀವ ಕೊಟ್ಟಂತೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…