ದಿನಕ್ಕೊಂದು ನೀತಿ ಕಥೆ

ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

428

 ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.

ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.

ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ  ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.

ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ  ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.

ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.

ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.

ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’

‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’

ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.

ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.

ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.

ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’

ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.

ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಸುದ್ದಿ

    ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು- ಸಚಿವರಿಗೆ ತಿರುಗೇಟು ಹರ್ಷಿಕಾ ಪೂನಚ್ಚ….!

    ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್‍ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.