ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…