News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

607

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….