ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….