ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.