ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ!
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…