ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಪತ್ರಿಕೆಯೊಂದು ವರದಿ ಮಾಡಿರುವಂತೆ, ಪ್ರಸ್ತುತ ಭಾರತೀಯ ಸೇನೆಗೆ ಅಮೆರಿಕದಿಂದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಇದೀಗ ಈ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಇನ್ನು ಮುಂದೆ ಭಾರತದಲ್ಲೇ ತಯಾರಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ ಸ್ವದೇಶಿ ‘ಬುಲೆಟ್ಪ್ರೂಫ್’ ಜಾಕೆಟ್ವೊಂದನ್ನು ಅಭಿವೃದ್ಧಿಪಡಿಸಿದ್ದಾರೆ.
ಇದರ ಬಳಕೆಗೆ ರಕ್ಷಣಾ ಸಚಿವಾಲಯದ ಉನ್ನತಾಧಿಕಾರ ಸಮಿತಿ ಕೂಡ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್ಪ್ರೂಫ್ ಜಾಕೆಟ್ ಅನ್ನು ಧರಿಸಲು ದಾರಿ ಸುಗಮವಾಗಿದೆ.
ಇನ್ನು ಈ ಬುಲೆಟ್ ಪ್ರೂಫ್ ಜಾಕೆಟ್ ಗಳು ಕಡಿಮೆ ವೆಚ್ಚದ್ದಾಗಿದ್ದು, ಒಂದು ಜಾಕೆಟ್ ನಿರ್ಮಾಣಕ್ಕೆ ಕೇವಲ 50 ಸಾವಿರ ರು. ವೆಚ್ಚ ತಗುಲುತ್ತದೆ. ಆದರೆ ಅಮೆರಿಕದ ಜಾಕೆಟ್ ಗಳಿಗೆ 1.50 ಲಕ್ಷ ರು. ವೆಚ್ಚವಾಗುತ್ತಿದೆ. ಜತೆಗೆ ಒಂದು ಕವಚ 15ರಿಂದ 18 ಕೆ.ಜಿ.ವರೆಗೂ ತೂಕವಿದೆ. ಇಷ್ಟು ಮಣ ಭಾರದ ಜಾಕೆಟ್ ಧರಿಸಿ ಉಗ್ರರ ಜತೆ ಕಾದಾಡಬೇಕಾದ ಪರಿಸ್ಥಿತಿ ಯೋಧರಿಗಿದೆ.
ಇದನ್ನು ಮನಗಂಡ ಬಂಗಾಳಿ ವಿಜ್ಞಾನಿ ಪ್ರೊ| ಶಂತನು ಭೌಮಿಕ್ ಅತ್ಯಂತ ಕಡಿಮೆ ತೂಕದ, ಥರ್ಮೋ ಪ್ಲಾಸ್ಟಿಕ್ ಜಾಕೆಟ್ ಅನ್ನು ಅಭಿವೃದ್ಧಿಪಡಿ ಸಿದ್ದಾರೆ. ಈ ಜಾಕೆಟ್ ಬೆಲೆ 50 ಸಾವಿರ ವಿರಲಿದ್ದು, ತೂಕ 1.5 ಕೆ.ಜಿ.ಯಿರಲಿದೆ.
ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಧರಿಸಲು ಹಾದಿ ಸುಗಮವಾದಂತಾಗಿದೆ. ಜತೆಗೆ ರಕ್ಷಣಾ ಇಲಾಖೆಯ ಬೊಕ್ಕಸಕ್ಕೆ ಪ್ರತಿ ವರ್ಷ 20 ಸಾವಿರ ಕೋಟಿ ರು. ಉಳಿತಾಯವಾಗಲಿದೆ.
ಪ್ರಸ್ತುತ ಭಾರತೀಯ ಯೋಧರಿಗೆ ಅಗ್ಗದ ಮತ್ತು ಕಡಿಮೆ ತೂಕದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಸಂಶೋಧಿಸಿರುವ, ವಿಜ್ಞಾನಿ ಶಾಂತನು ಭೌಮಿಕ್ ಮೂಲತಃ ಬಂಗಾಳ ಮೂಲದವರಾಗಿದ್ದು, ಪ್ರಸ್ತುತ ಕೊಯಮತ್ತೂರಿನ ಅಮೃತ ವಿಶ್ವವಿದ್ಯಾಲಯದಲ್ಲಿ ಏರೇಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ತಮ್ಮ ವಿನೂತನ ಸಂಶೋಧನೆಯನ್ನು ವಿಜ್ಞಾನಿ ಶಾಂತನು ಭೌಮಿಕ್ ಅವರು ನೇತಾಜಿ ಸುಭಾಷ್ ಚಂದ್ರಬೋಸ್ ಅವರಿಗೆ ಸಮರ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…