ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…