ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…