ದಿನಕ್ಕೊಂದು ನೀತಿ ಕಥೆ

ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

2497

ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.

ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.

‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.

ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.

ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.

ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.

‘’ಭೂಮಿ ತಲೆಕೆಳಗಾಗುತ್ತಿದೆ.’’

‘’ಅದನ್ನು ನೋಡಿದವರಾರು?’’

‘’ಆನೆ’’

ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು.  ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.

‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.

‘’ಹೌದು, ನಾನು ನೋಡಿದೆ’’ ಎಂದಿತು ಮೊಲ.

‘’ಎಲ್ಲಿ?’’

‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’

ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.

ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’  ಎಂದು ತೋರಿಸಿತು.

ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.

ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…