ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.