ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…