ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()