ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..