ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.
ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.
ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.
ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…