ದಿನಕ್ಕೊಂದು ನೀತಿ ಕಥೆ

ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

501

ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.

ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫ‌ಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.

ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.

ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.

ಮೂಲ:- 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.