ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.
ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.
ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.
ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…