ಸ್ಪೂರ್ತಿ

ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

1147

ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು‌… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

*ಸುಗ್ಗಿ ಕಣದ ನಿರ್ಮಾಣ*

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

*ಸಾಮೂಹಿಕ ಪೊಂಗಲ್*

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

 

*ಗೋ ಪೂಜೆಯ ಮಹತ್ವ*

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

*ಮುಖ್ಯ ಅತಿಥಿಯಾಗಿ ಪ್ರಥಮ್*

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

*ವಿಭಿನ್ನ ಪ್ರಯತ್ನಕ್ಕೆ ನಮ್ಮದೊಂದು ಸಲಾಮ್*

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

*ಶೇರ್ ಮಾಡಿ ಇವರು ಮಾಡುತ್ತಿರುವ ಕಾರ್ಯ ಇನ್ನಷ್ಟು ಜನರಿಗೆ ಸ್ಪೂರ್ತಿಯಾಗಲಿ..*

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…