ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.
ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.
ಇದಕ್ಕೆ ಪೂರಕ ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..
ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.
ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್ ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.
ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು ಕೂಡ ಪರಿಣಾಮ ಬೀರುತ್ತಿವೆ.
ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.
ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ ಕಂಡುಬಂದಿದೆ.
ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.
ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…