ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.
ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.
ಇದಕ್ಕೆ ಪೂರಕ ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.
ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್ ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.
ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು ಕೂಡ ಪರಿಣಾಮ ಬೀರುತ್ತಿವೆ.
ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.
ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.
ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…