ಸಂಬಂಧ

ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

280

ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.

ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.

ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.

ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.

ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ  ಸುಮಾರು     6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ  ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.

ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.

ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.