News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

101

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಉಪಯುಕ್ತ ಮಾಹಿತಿ

    ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

    ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…