ಸುದ್ದಿ

ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

26

ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು.

ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ ಹಾಗೂ ಅಬಕಾರಿ ನಿಯಮಗಳಡಿ ಅದಕ್ಕೆ ಅವಕಾಶವೂ ಇಲ್ಲ ಎಂದು ತೀರ್ಪು ನೀಡಿದೆ.

ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ ಲೈಸೆನ್ಸ್ ಹೊಂದಿರುವವರು ಮಾತ್ರ ನಿಗದಿಪಡಿಸಿದ ಸಮಯದಲ್ಲಿ ಮದ್ಯವನ್ನು ಮಾರಾಟ ಮಾಡಬಹುದಾಗಿದ್ದು, ಆದರೆ ಆನ್ ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ದಿನದ 24 ಗಂಟೆಯೂ ವಹಿವಾಟು ನಡೆಸಬಹುದಾಗಿದೆ. ಹಾಗಾಗಿ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…