ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ.
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.
ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.
ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.
ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…