News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

903

ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. 
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ರಾಶಿಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…