ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ.
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…