ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ.
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…