ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ.
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.

ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.

ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.

ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ