ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ.

ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವುದು ಕಾಮನ್ಆಗಿ ಬಿಟ್ಟಿದೆ. ಆದರೆ, ಉತ್ತರ ಪ್ರದೇಶದಲ್ಲಿದೇವರೇ ಮಾಸ್ಕ್ ಹಾಕಿಕೊಂಡು ಭಕ್ತರಿಗೆ ದರ್ಶನ ಕೊಡುತ್ತಿದ್ದಾನೆ.

ದೇವರ ದರ್ಶನಕ್ಕೆ ಬರುವ ಭಕ್ತರಿಗೆ ದೇವರ ಮುಖವೇ ಕಾಣುತ್ತಿಲ್ಲ. ಏಕೆಂದರೆ ದೇವರ ಮುಖಕ್ಕೆ ಇಲ್ಲಿ ಅರ್ಚಕರು ಮಾಸ್ಕ್ ಹಾಕಿ ಕೂರಿಸಿದ್ದಾರೆ. ಶಿವ-ಪಾರ್ವತಿ, ದುರ್ಗಾದೇವಿ ಹಾಗೂ ಸಾಯಿ ಬಾಬಾ ದೇವರ ವಿಗ್ರಹಗಳ ಮುಖಕ್ಕೆ ಮಾಸ್ಕ್ ಹಾಕಲಾಗಿದೆ.ವಾಯುಮಾಲಿನ್ಯ ಹೆಚ್ಚಾಗಿದ್ದಕ್ಕೆ ಈಗ ಶಿವ-ಪಾರ್ವತಿ ಮುಖಕ್ಕೆ ಮಾಸ್ಕ್ ಹಾಕಿದ್ದು ಎಲ್ಲರಿಗೂ ಗೊತ್ತಿದೆ.

ಆದರೆ, ಚಳಿಗಾಲದಲ್ಲಿ ಇದೇ ಶಿವ-ಪಾರ್ವತಿ ವಿಗ್ರಹಗಳಿಗೆ ಸ್ವಟರ್ ತೊಡಿಸಲಾಗುತ್ತದೆ ಎಂದುಸ್ವತಃ ದೇಗುಲದ ಮುಖ್ಯ ಅರ್ಚಕರೇ ತಿಳಿಸಿದ್ದಾರೆ. ಇಲ್ಲಿ ದೇವರನ್ನು ಮನುಷ್ಯರಂತೆ ನೋಡಿಕೊಳ್ಳಲಾಗುತ್ತದೆ. ಚಳಿಗಾಲದಲ್ಲಿ ವಿಗ್ರಹಗಳಿಗೆ ಸ್ವಟರ್ ಗಳನ್ನು ತೊಡಿಸಲಾಗುತ್ತದೆ. ಈಗ ಪರಿಸರದಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದಕ್ಕೆ, ದೇವರ ಮುಖಕ್ಕೆ ಮಾಸ್ಕ್ ಹಾಕಲಾಗುತ್ತಿದೆ ಎಂದು ಅರ್ಚಕರು ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…