ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.
ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.
ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.
ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !
*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.
*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.
*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.
*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.
ನೋಡಿದರಲ್ಲ ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ? ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…