ಆರೋಗ್ಯ, ಉಪಯುಕ್ತ ಮಾಹಿತಿ

ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ.!ಶೇರ್ ಮಾಡಿ…

4735

ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು”  ಅಡಿಗೆ ಮನೇಲಿ  ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ  ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

ಪುದಿನ ಮಾರಕ ಕಾಯಿಲೆಯಾದ  ಕ್ಯಾನ್ಸರ್ ಸೇರಿದಂತೆ  ತುಂಬಾ ಕಾಯಿಲೆಗಳಿಗೆ ಒಳ್ಳೆಯದು:- 

ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.

ನಮ್ಮ ಚರ್ಮದ ಮೇಲೆ ಪುದಿನ ಮೋಡಿ :-

ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.

ಅಡಿಗೆ ಉಪಯೋಗದಲ್ಲಿ :-

ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.

ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !

*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.

*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ. 

*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.

*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.

*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.

*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.

ನೋಡಿದರಲ್ಲ  ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ?  ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಜ್ಯೋತಿಷ್ಯ

    ಅರ್ಧನಾರೀಶ್ವರನನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯದಲ್ಲಿ ಏನಿದೆ ಎಂದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.