ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.
ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.
ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.
ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !
*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.
*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.
*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.
*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.
ನೋಡಿದರಲ್ಲ ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ? ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…