ಉಪಯುಕ್ತ ಮಾಹಿತಿ

ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

1034

ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು”  ಅಡಿಗೆ ಮನೇಲಿ  ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ  ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

ಪುದಿನ ಮಾರಕ ಕಾಯಿಲೆಯಾದ  ಕ್ಯಾನ್ಸರ್ ಸೇರಿದಂತೆ  ತುಂಬಾ ಕಾಯಿಲೆಗಳಿಗೆ ಒಳ್ಳೆಯದು:- 

ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.

ನಮ್ಮ ಚರ್ಮದ ಮೇಲೆ ಪುದಿನ ಮೋಡಿ :-

ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.

ಅಡಿಗೆ ಉಪಯೋಗದಲ್ಲಿ :-

ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.

ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !

*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.

*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ. 

*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.

*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.

*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.

*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.

ನೋಡಿದರಲ್ಲ  ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ?  ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.