ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಕಾಡುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳೇನು ಎಂಬ ಬಗ್ಗೆ ವಿವರಗಳು ಇಲ್ಲಿವೆ :-
ಮಲೇರಿಯಾ :-
ಮುಂಗಾರು ಸಂದರ್ಭದಲ್ಲಿ ಅತೀ ಸಾಮಾನ್ಯವಾಗಿ ಕಾಣಿಸುವ ಜ್ವರ, ಅಂದರೆ ಮಲೇರಿಯಾ ರೋಗ. ಹೆಣ್ಣು ಅನಾಫಿಲಿಸ್ ಸೊಳ್ಳೆ ಕಡಿತದಿಂದಾಗಿ ಈ ಜ್ವರ ಹಬ್ಬುತ್ತದೆ. ಹೆಚ್ಚಾಗಿ ನೀರು ನಿಂತಿರುವ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿರುತ್ತದೆ.
ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯ ಮೂಲಕ ಈ ರೋಗಕ್ಕೆ ಕಾರಣ. ಮಲೇರಿಯಾ ಜ್ವರ ಸಾಮಾನ್ಯ ಜ್ವರದಂತೆಯೇ ಕಾಣಿಸಿಕೊಳ್ಳಬಹುದು. ಆದರೆ ಬಳಿಕ ತೀವ್ರ ರೀತಿಯ ಜ್ವರ ಇರುತ್ತದೆ. ಮೈಕೈ ನೋವು, ತಲೆನೋವು, ತೀವ್ರ ಸುಸ್ತು ಇತ್ಯಾದಿ ಸಾಮಾನ್ಯ. ಇದಕ್ಕಾಗಿ ಸೂಕ್ತ ರಕ್ತ ಪರೀಕ್ಷೆಯೊಂದಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
ಮುನ್ನೆಚ್ಚರಿಕೆ ಏನು:-
ಮಲೇರಿಯಾ ರೋಗಾಣು ಕೇವಲ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಮೂಲಕ ಮಾತ್ರ ಹರಡುತ್ತದೆ. ಆದ್ದರಿಂದ ಸೊಳ್ಳೆ ಕಡಿತವಾಗದಂತೆ ನೆಟ್ ಹಾಕುವುದು, ಮೈ ಪೂರ್ತಿ ಬಟ್ಟೆ ತೊಟ್ಟುಕೊಳ್ಳುವುದು ಮಾಡಬೇಕು, ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದೆಡೆ ಔಷದ ಸಿಂಪಡಣೆ ಮಾಡಬೇಕು. ಒಂದು ವೇಳೆ ಜ್ವರ ತೀವ್ರವಾದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ರೋಗಿಗೆ ಸಂಪೂರ್ಣ ವಿಶ್ರಾಂತಿಯೂ ಅಗತ್ಯ.
ಡೆಂಗ್ಯೂ:-

ಮಳೆಗಾಲದಲ್ಲಿ ಸಾಮಾನ್ಯ ಜ್ವರ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ನಮ್ಮ ದೇಹ ಬಹುಬೇಗ ಈ ವೈರಾಣು ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಜ್ವರ ಹಬ್ಬುತ್ತದೆ.
ಈ ಸೊಳ್ಳೆ ಹಗಲಲ್ಲೇ ಕಚ್ಚುತ್ತದೆ. ಜನ ಸಂಚಾರ ಹಗಲು ಹೆಚ್ಚಾಗುವುದರಿಂದ ವೇಗವಾಗಿ ಜ್ವರ ಹಬ್ಬುವುದಕ್ಕೂ ಕಾರಣವಾಗುತ್ತದೆ. ತೀವ್ರ ಮೈ,ಕೈ ನೋವು, ಬೆನ್ನು ನೋವು, ವಾಂತಿ-ಭೇದಿ, ನಿಶ್ಯಕ್ತಿ ಇತ್ಯಾದಿ ಕಾಣಬಹುದು.
ಈ ಜ್ವರದ ಆರಂಭದಲ್ಲಿ ಶೀತ,ಕೆಮ್ಮು ಇರುವುದಿಲ್ಲ. ಕಣ್ಣು ಕೆಂಪಾದ ಲಕ್ಷಣ, ವಾಂತಿ ಇತ್ಯಾದಿ ಆದರೆ ಕೂಡಲೇ ವೈದ್ಯರನ್ನು ಕಾಣಬೇಕು. ಜ್ವರ ತಗುಲಿ ಹೆಚ್ಚಾದರೆ, ರಕ್ತದ ಕಣಗಳು ಕಡಿಮೆಯಾಗುತ್ತದೆ. ಬಿಳಿ ರಕ್ತಕಣ ಕಡಿಮೆಯಾಗಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಮಸ್ಯೆ ಇದ್ದರೆ ಸಾವಿಗೆ ಕಾರಣವಾಗುತ್ತದೆ.
ಮುನ್ನೆಚ್ಚರಿಕೆಯೇನು:-
ನಿಂತ ನೀರಲ್ಲಿ ಈ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಔಷದಿ, ಸೀಮೆ ಎಣ್ಣೆ ಸಿಂಪಡಣೆ, ಹೊಗೆ ಹಾಕಿ ಸೊಳ್ಳೆಗಳ ಉಪಟಳ ಕಡಿಮೆ ಮಾಡುವುದು, ಮೈಮುಚ್ಚಿಕೊಳ್ಳುವ ಬಟ್ಟೆ ತೊಡುವುದು, ನೀಲಗಿರಿ ಸಿಟ್ರೊಟೊರ ತೈಲವನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ಪಾರಾಗಬಹುದು.
ವಿಷಮಶೀತ ಜ್ವರ

ಸಾಮಾನ್ಯವಾಗಿ ಟೈಫಾಯಿಡ್ ಎಂಬ ಹೆಸರಿನಿಂದ ಕರೆಯುವ ಈ ಜ್ವರ ಸಾಲ್ಮೊನೆಲ್ಲಾ ಎಂಟಾರಿಕಾ ಟೈಪೈ ಎನ್ನುವ ಬ್ಯಾಕ್ಟೀರಿಯಾದಿಂದ ಬರುತ್ತದೆ. ವಿಶ್ವಾದ್ಯಾಂತ ಈ ರೋಗ ಸಾಮಾನ್ಯವಾಗಿ ಕಂಡು ಬರುತ್ತದೆ.
ಮಳೆಗಾಲದಲ್ಲಿ ಈ ರೋಗ ಅತೀ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚು. ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಈ ರೋಗ ಹಬ್ಬುತ್ತದೆ.
ರೋಗ ಬಾಧಿಸಿದ ವ್ಯಕ್ತಿಗೆ ಜ್ವರ, ಬೇಧಿ,ಗಂಟಲು ನೋವು, ಮೈಕೈ ನೋವು, ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಜ್ವರ ಶುರುವಾಗಿ ನಾಲ್ಕಾರು ದಿನಗಳಲ್ಲಿ ಮೈ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದಂತೆಯೇ ವೈದ್ಯರನ್ನು ಕಾಣಬೇಕು.
ಮುನ್ನೆಚ್ಚರಿಕೆ ಕ್ರಮವೇನು:-
ಆಹಾರವನ್ನು ತಯಾರಿಸಿ ಬಳಿಕ ಅದನ್ನು ಮುಚ್ಚಿಡಬೇಕು. ಕುದಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರ ತಯಾರಿಸುವಾಗ ಶುಚಿತ್ವ ಕಾಯ್ದುಕೊಳ್ಳಬೇಕು.
ಚಿಕನ್ಗುನ್ಯಾ:-

ಈಡಿಸ್ ಅಲ್ಪೋಪಿಕ್ಟಸ್ ಸೊಳ್ಳೆಗಳಿಂದ ಈ ರೋಗದ ಚಿಕನ್ಗುನ್ಯಾ ವೈರಸ್ ಹಬ್ಬುತ್ತದೆ. ಇದು ಪ್ರಾಣಿಗಳಿಂದ ಬರುವ ಕಾಯಿಲೆಯಾಗಿದ್ದು, ತೀವ್ರ ತರವಾದ ಗಂಟುನೋವು, ಜ್ವರ ಇತ್ಯಾದಿಗಳು ಕಾಣಿಸಿಕೊಳ್ಳುತ್ತವೆ. ಹಗಲಲ್ಲೇ ಈ ಸೊಳ್ಳೆಗಳು ಕಚ್ಚುತ್ತವೆ. ಜ್ವರ ವಾಸಿಯಾದ ಮೇಲೂ ವಾರಗಳ ತನಕ ಗಂಟು ನೋವುಗಳು ಇರಬಹುದು.
ಮುನ್ನೆಚ್ಚರಿಕೆ ಏನು:-
ಮನೆ ಸುತ್ತ ಸೊಳ್ಳೆಗಳ ಆವಾಸ ಸ್ಥಾನ ಸೃಷ್ಟಿಯಾಗಲು ಬಿಡಲೇಬಾರದು. ಕೊಳಚೆ ಪ್ರದೇಶದಿಂದ ದೂರವಿರಬೇಕು. ಮೈತುಂಬ ಬಟ್ಟೆ, ನಿಲಗಿರಿ ಎಣ್ಣೆ ಮೈಗೆ ಹಚ್ಚುವುದರಿಂದ ಸೊಳ್ಳೆ ಕಡಿತ ತಪ್ಪಿಸಿಕೊಳ್ಳಬಹುದು.
ಕಾಲರಾ:-

ಮಳೆಗಾಲದ ಮಾರಣಾಂತಿಕ ಕಾಯಲೆಯಾಗಿದ್ದು. ಕಲುಷಿತ ನೀರು, ಆಹಾರ ಸೇವನೆಯಿಂದ ಈ ರೋಗ ಕಾಣಿಸಿಕೊಳ್ಳುತ್ತದೆ. ತೀವ್ರ ಭೇದಿ ಇದರ ಸಾಮಾನ್ಯ ಲಕ್ಷಣ. ತೀವ್ರ ಜ್ವರವೂ ಕಾಣಿಸಿಕೊಳ್ಳಬಹುದು.
ಸೂಕ್ತ ಶೌಚಾಲಯ ಇಲ್ಲದಿರುವ ಸ್ಥಳಗಳಲ್ಲಿ ಈ ರೋಗ ಬಹುಬೇಗನೆ ಹಬ್ಬುತ್ತದೆ. ರೋಗಿಯಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಂಡು ಬಳಿಕ ಇದು ಪ್ರಾಣಾಂತಿಕವೇ ಆಗಬಹುದು. ಆದ್ದರಿಂದ ವೈದ್ಯರ ಭೇಟಿ ಅಗತ್ಯ.
ಮುನ್ನೆಚ್ಚರಿಕೆಯೇನು:-
ಕಾಲರಾ ಕಂಡುಬಂದಲ್ಲಿ 6 ತಿಂಗಳು ವೈದ್ಯಕೀಯ ನೆರವು ಬೇಕು. ಆಹಾರ, ನೀರಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಬಯಲು ಶೌಚಾಲಯದಿಂದ ದೂರವಿರುವುದು ಒಳ್ಳೆಯದು.
ಕಾಮಾಲೆ:-
ಅರಸಿನ ಕಾಮಾಲೆ, ಅರಸಿನ ಮುಂಡಿಗೆ,ಕಾಮಾಲೆ ರೋಗ ಎಂಬ ಹೆಸರು ಜಾಂಡಿಸ್ಗಿದೆ. ದೇಹದಲ್ಲಿ ಬೈಲ್ರೂಬಿನ್ ಎಂಬ ಕಿತ್ತಳೆ ಬಣ್ಣದ ವಿಸರ್ಜನೆಯಾಗಬೇಕಾದ ವಸ್ತು ಅಗತ್ಯಕ್ಕಿಂತ ಹೆಚ್ಚು ಶೇಖರವಾಗಿ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಪಿತ್ತಕೋಶಕ್ಕೆ ವೈರಾಣು ಸೊಂಕು ತಗಲುವುದರಿಂದ ಕಾಮಾಲೆ ಕಾಣಿಸಿಕೊಳ್ಳುತ್ತದೆ.
ಇದಕ್ಕೆ ಕಲುಷಿತ ನೀರು, ಆಹಾರ ಕಾರಣ, ಕಾಮಾಲೆ ರೋಗದಿಂದ ತೀವ್ರ ಬಳಲಿಕೆ, ವಾಂತಿ, ಪಿತ್ತಕೋಶದ ಸಮಸ್ಯೆ ಕಾಣಿಸಬಹುದು. ಅಲ್ಲದೇ ಇದು ಇತರ ದೈಹಿಕ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ರೋಗ ಲಕ್ಷಣ ಕಾಣಿಸುತ್ತಿದಂತೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಅಗತ್ಯ. ಕಾಯಿಲೆ ನಿರ್ಲಕ್ಷಿಸಿ ತೀವ್ರವಾದರೆ ಪ್ರಾಣಕ್ಕೆ ಎರವಾಗಬಹುದು.
ಮುನ್ನೆಚ್ಚರಿಕೆ ಏನು:- ಕಲುಷಿತ ಆಹಾರ ಸೇವಿಸದೇ ಇರುವುದು, ಬಿಸಿ ನೀರನ್ನೇ ಸೇವಿಸುವುದು ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…