ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಜೂನ್ 1 ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್ ಪಂದ್ಯದ ಕೊನೆಯ ಓವರ್ ವೀಕ್ಷಿಸುತ್ತಿದ್ದ ಬಟ್ಲರ್ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಭಾನುವಾರ ಹೈದರಾಬಾದ್ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್ – ರೈಸಿಂಗ್ ಪುಣೆ ತಂಡಗಳು ಮುಖಾಮುಖಿಯಾದವು.
ಐಪಿಎಲ್ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 129 ರನ್ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.
ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 128 ರನ್ ಗಳಿಸಿತು. ಮುಂಬೈ ತಂಡ 1 ರನ್ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.