ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.
1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.
2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.
3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.
ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.
ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.
ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.
* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ
* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ
* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್
* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.
ಮುದ್ರಾ ಕಾರ್ಡ್ :

ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…