ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.
1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.
2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.
3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.
ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.
ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.
ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.
* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ
* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ
* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್
* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.
ಮುದ್ರಾ ಕಾರ್ಡ್ :

ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…