ಸುದ್ದಿ

ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

60

ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು ಶಿಂಧೆ ಎಂಬವರು ಕೆಲಸಕ್ಕಾಗಿ ತೆರಳುವಾಗ ರೈಲು ನಿಂತಿದ್ದನ್ನು ಗಮನಿಸಿದ್ದಾರೆ. ರೈಲಿನ ಚಾಲಕ ಕೆಳಗಿಳಿದು ಬಂದು ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಸೋನು ಶಿಂಧೇ ವಿಡಿಯೋ ಮಾಡಿದ್ದು, ಇದೀಗ ವೈರಲ್ ಆಗುತ್ತಿದೆ.

ಯಾವುದೇ ತಾಂತ್ರಿಕ ವೈಫಲ್ಯ ಅಥವಾ ಕೆಂಪು ಸಿಗ್ನಲ್ ನೋಡಿ ರೈಲನ್ನು ನಿಲ್ಲಿಸಲಿಲ್ಲ. ನಾನು ಕೆಲಸಕ್ಕೆ ಹೋಗುವಾಗ ರೈಲು ಎರಡು ನಿಲ್ದಾಣದ ನಡುವೆ ನಿಂತಿತ್ತು. ಆಗ ಚಾಲಕ ರೈಲಿನಿಂದ ಇಳಿದು ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಹಾಗಾಗಿ ನಾನು ಅವರ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಸೆರೆ ಹಿಡಿದಿದ್ದೇನೆ ಎಂದು ಸೋನು ಶಿಂಧೇ ಹೇಳಿದ್ದಾರೆ.

ವೈರಲ್ ಫೋಟೋ ಹಾಗೂ ವಿಡಿಯೋಗಳು ಕೇಂದ್ರ ರೈಲ್ವೆ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನನ್ನಂತಹವರು ಎಷ್ಟೇ ಜನರು ಬಂದ್ರೂ, ಈ ನಾಲ್ಕು ಹೆಸರನ್ನು ಜನರ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ ಚಾಲೆಂಜಿಂಗ್ ಸ್ಟಾರ್..!

    ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್‍, ದರ್ಶನ್‍ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್‍ ಕುಮಾರ್, ಶಂಕರ್ ನಾಗ್‍, ಅಂಬರೀಷ್‍, ವಿಷ್ಣುವರ್ಧನ್‍ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…